ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ ನಾನು ತಾಳ್ಮೆಯಿಂದ ಇದ್ದ ಕಾರಣಕ್ಕೆ ಈ ಸ್ಥಾನದಲ್ಲಿದ್ದೇನೆ: ಸಿಎಂ ಡಿ ಕೆ ಶಿವಕುಮಾರ್

1 min read · Updated 10 views
WhatsApp
ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ ನಾನು ತಾಳ್ಮೆಯಿಂದ ಇದ್ದ ಕಾರಣಕ್ಕೆ ಈ ಸ್ಥಾನದಲ್ಲಿದ್ದೇನೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು, ಆ. 03:

"ನಾವು ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ಶಾಸಕರು ತಾಳ್ಮೆಯಿಂದ ಇರಬೇಕು" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದರು.

ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

"ನಾನು ರಾಜ್ಯಪಾಲರಿಗೆ ನೂತನ ಸಚಿವರ ಪಟ್ಟಿ ಕಳುಹಿಸಿದ್ದೇನೆ. ಬಹಳಷ್ಟು ಆಕಾಂಕ್ಷಿಗಳು ಇದ್ದಾರೆ. ಬಹಳ ಶಾಸಕರು ಅರ್ಹರಿದ್ದಾರೆ. ಕೆಲವು ಸಂದರ್ಭದಲ್ಲಿ ಪಕ್ಷ ತೀರ್ಮಾನ ಮಾಡುತ್ತದೆ. 2004ರಲ್ಲಿ ನನ್ನನ್ನೂ ಸಂಪುಟಕ್ಕೆ ತೆಗೆದುಕೊಂಡಿರಲಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರದಲ್ಲೂ ಆರಂಭದಲ್ಲಿ ನನ್ನನ್ನು ಮಂತ್ರಿ ಮಾಡಿರಲಿಲ್ಲ. ಆಗ ನಾವು ತಾಳ್ಮೆಯಿಂದ ಇದ್ದೆವು, ತಾಳ್ಮೆಯಿಂದ ಇದ್ದ ಕಾರಣಕ್ಕೆ ಇಂದು ನಾನು ಈ ಸ್ಥಾನದಲ್ಲಿ ಇದ್ದೇನೆ" ಎಂದು ತಿಳಿಸಿದರು.

Advertisement
AdSense · in-feed

Related